Showing posts with label ಗಣೇಶೋತ್ಸವ. Show all posts
Showing posts with label ಗಣೇಶೋತ್ಸವ. Show all posts

Wednesday, September 18, 2024

ಗಣೇಶೋತ್ಸವ ೨೦೨೪: ಭರತನಾಟ್ಯ

 ಗಣೇಶೋತ್ಸವ ೨೦೨೪: ಭರತನಾಟ್ಯ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ೨೦೨೪ ಸೆಪ್ಟೆಂಬರ್‌ ೧೩, ೧೪ ಮತ್ತು ೧೫ರಂದು ಗಣೇಶೋತ್ಸವ ಕಾರ್ಯಕ್ರಮ ಸಡಗರದೊಂದಿಗೆ ನಡೆಯಿತು. ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮೈಸೂರಿನ ವಿದುಷಿ ಶ್ರೀಮತಿ ಮಧುರಾ ಕಾರಂತ್‌ ಅವರು ತಮ್ಮ ಭರತನಾಟ್ಯದ ಮೂಲಕ ಪ್ರೇಕ್ಷಕರ ಮನ ಗೆದ್ದರು. ಮಧುರಾ ಅವರ ಭರತನಾಟ್ಯದ ಒಂದು ದೃಶ್ಯ ಇಲ್ಲಿದೆ:
Click here to view Video- ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ:

ಇವುಗಳನ್ನೂ ಓದಿರಿ:

Friday, September 13, 2024

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

 ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ಬೆಂಗಳೂರು: ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ 2024ರ ಸಾರ್ವಜನಿಕ ಗಣೇಶೋತ್ಸವ ಸಡಗರದೊಂದಿಗೆ 2024 ಸೆಪ್ಟೆಂಬರ್‌ 13ರ ಶುಕ್ರವಾರ ಆರಂಭಗೊಂಡಿತು.

ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯದ ಕಂದಾಯ ಸಚಿವರೂ  ಬ್ಯಾಟರಾಯನಪುರ ಕ್ಷೇತ್ರದ ಶಾಸಕರೂ ಆದ ಶ್ರೀ ಕೃಷ್ಣ ಬೈರೇಗೌಡ ಅವರು ಪಾಲ್ಗೊಂಡರು. ಅವರ ಜೊತೆಗೆ ಯುವ ನಾಯಕ ಶ್ರೀ ಶಿವಕುಮಾರ್‌ ಮತ್ತು ಇತರರೂ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಶುಕ್ರವಾರ ಬೆಳಗ್ಗೆ ವಿಗ್ರಹ ಪ್ರತಿಷ್ಠಾಪನೆ, ಪ್ರಾಣಪ್ರತಿಷ್ಠೆ ಮತ್ತು ಗಣಪತಿ ಉಪನಿಷತ್‌ ಸಹಿತ ಪೂಜೆ ನೆರವೇರಿತು. ಸಂಜೆ 6 ಗಂಟೆಗೆ ಬೆಂಗಳೂರಿನ ಸ್ವರ ಚಿರಂತನ ತಂಡದಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ 9ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದೆ.

2024 ಸೆಪ್ಟೆಂಬರ್‌ 14ರ ಶನಿವಾರ ಬೆಳಗ್ಗೆ 9 ಗಂಟೆಗೆ ಕೇರಳ ಚೆಂಡೆ ವಾದನದ ವಿಶೇಷ ಆಕರ್ಷಣೆಯೊಂದಿಗೆ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ ಮತ್ತು ಅಭಯ ಆಂಜನೇಯ ಪೂಜೆಯ ಜೊತೆಗೆ ಪ್ರತಿಷ್ಠಾಪಿತ ಸಾರ್ವಜನಿಕ ಗಣಪ- ಗೌರಿ ದೇವರಿಗೆ ಗಣಪತಿ ಉಪನಿಷತ್‌ ಸಹಿತ ಪೂಜೆ ನಡೆಯಲಿದೆ ಬೆಳಗ್ಗೆ 9ರಿಂದ 12 ಗಂಟೆಯವರೆಗೆ ಬಡಾವಣೆಯ ಮಕ್ಕಳು, ಮಹಿಳೆಯರಿಗೆ ಆಟೋಟ ಸ್ಪರ್ಧೆ ನಡೆಯಲಿದೆ. ಸಂಜೆ 4 ಗಂಟೆಗೆ ಟಿಸಿಎಲ್‌ ಸೇವಾ ಸಮುದಾಯದಿಂದ ಸಂಗೀತ ಕಚೇರಿ, ರಾತ್ರಿ 7ರಿಂದ ವಿದುಷಿ ಶ್ರೀಮತಿ ಮಧುರಾ ಕಾರಂತ್‌ ಮೈಸೂರು ಅವರಿಂದ ಭರತ ನಾಟ್ಯ, ಆ ಬಳಿಕ ರಾತ್ರಿ 8 ಗಂಟೆಗೆ ಮಹಾಮಂಗಳಾರತಿ ನೆರವೇರಲಿದೆ.

2024 ಸೆಪ್ಟೆಂಬರ್‌ 15ರ ಭಾನುವಾರ ಬೆಳಗ್ಗೆ 9.30ಕ್ಕೆ ಗಣಪತಿ ಉಪನಿಷತ್‌ ಸಹಿತ ಪೂಜೆ, ಗಣ ಹವನ ನೆರವೇರಲಿದೆ. ಮಧ್ಯಾಹ್ನ 1ರಿಂದ ಪ್ರಸಾದ  ವಿನಿಯೋಗ, ಸಂಜೆ 5 ಗಂಟೆಗೆ ಮಹಾಪೂಜೆ, ಬಳಿಕ ಬಡಾವಣೆಯ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯಲಿದೆ.

ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವೆ ಶೋಭಾ ಕರಂದ್ಲಾಜೆ, ಬಡಾವಣೆಯ ಸ್ಥಾಪಕರಾದ ಮಾಲೂರು ಎಸ್‌ ಎನ್‌ ಕೃಷ್ಣಯ್ಯ ಶೆಟ್ಟಿ ಅವರು ಕೂಡಾ ಪಾಲ್ಗೊಳ್ಳಲಿದ್ದಾರೆ.


ಗಣೇಶೋತ್ಸವ ಕಾರ್ಯಕ್ರಮಕ್ಕೆ ಶ್ರೀಮತಿ ಹೇಮಾ ಮತ್ತು ಕುಟುಂಬದವರು ಗಣೇಶ ವಿಗ್ರಹವನ್ನು ಪ್ರಾಯೋಜಿಸಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಬಡಾವಣೆಯ ಮಹಿಳೆಯರು ಗಣ ಹೋಮದ ಪ್ರಾಯೋಜನೆ ಮಾಡಿದ್ದಾರೆ. ಶ್ರೀ ಮುನಿರಾಜು ಮತ್ತು ಕುಟುಂಬ ಹೂ-ಹಣ್ಣುಗಳನ್ನು ಪ್ರಾಯೋಜಿಸಿದ್ದರೆ, ರಸ ಮಂಜರಿ (ಆರ್ಕೆಸ್ಟ್ರಾ) ಕಾರ್ಯಕ್ರಮಕ್ಕೆ ಶ್ರೀ ಎಚ್. ಶಿವಕುಮಾರ್‌ ಪ್ರಾಯೋಜನೆ ಮಾಡಿದ್ದಾರೆ.

ಪೆಂಡಾಲ್‌ ಮತ್ತು ವೇದಿಕೆಗೆ ಶ್ರೀ ಸಿರಾಜ್‌ ಮತ್ತು ಕುಟುಂಬ ಪ್ರಾಯೋಜನೆ ಮಾಡಿದ್ದರೆ, ಕೇರಳ ಚೆಂಡೆ ವಾದನಕ್ಕೆ ಬಡಾವಣೆಯ ಮಲಯಾಳಿ ಗೆಳೆಯರು ಪ್ರಾಯೋಜನೆ ಮಾಡಿದ್ದಾರೆ. ಶಾಸ್ತ್ರೀಯ ಸಂಗೀತವನ್ನು ಶ್ರೀ ರಾಘವೇಂದ್ರ ಕಾಮತ್‌ ಮತ್ತು ಶ್ರೀ ಮಧು ನಾಯರ್‌ ಪ್ರಾಯೋಜಿಸಿದ್ದಾರೆ.

ಶ್ರೀ ಪ್ರದೀಪ ಶಾಸ್ತ್ರಿ  ಮತ್ತು ಕುಟುಂಬ ಭರತ ನಾಟ್ಯದ ಪ್ರಾಯೋಜಿಕತ್ವ ವಹಿಸಿಕೊಂಡಿದ್ದರೆ ಶ್ರೀ ಎಚ್.ವಿ. ಉದಯಶಂಕರ್‌, ಶ್ರೀ ನಾಗರಾಜ್‌, ಶ್ರೀ ವಿ. ಮುನಿರಾಜು ಮತ್ತು ಶ್ರೀ ಕೃಷ್ಣೋಜಿ ರಾವ್‌ ಪ್ರಸಾದಕ್ಕೆ ಪಾಯೋಜಿಕತ್ವ ವಹಿಸಿಕೊಂಡಿದ್ದಾರೆ.

ಬಡಾವಣೆ ಮತ್ತು ಆಸುಪಾಸಿನ ಭಕ್ತಾದಿಗಳೂ ಉದಾರ ದೇಣಿಗೆ ಮೂಲಕ ಉತ್ಸವ ಯಶಸ್ಸಿಗೆ ಶ್ರಮಿಸಿದ್ದರೆ, ಯುವಕರ ತಂಡ ಗಣಪನ ಸೇವೆಗೆ ಹೆಗಲು ನೀಡಿ ಉತ್ಸವಕ್ಕೆ ಕಳೆಗಟ್ಟಿಸಿದೆ. 



ಇವುಗಳನ್ನೂ ಓದಿರಿ: 

Tuesday, September 26, 2023

ಶ್ರೀ ಬಾಲಾಜಿ ಕೃಪಾ ಬಡಾವಣೆ ಗಣೇಶೋತ್ಸವ: ಚೆಂಡೆ ಸಂಭ್ರಮ

 ಶ್ರೀ ಬಾಲಾಜಿ ಕೃಪಾ ಬಡಾವಣೆ ಗಣೇಶೋತ್ಸವ: ಚೆಂಡೆ ಸಂಭ್ರಮ

ಬೆಂಗಳೂರು: ಚೆಂಡೆ ಧ್ವನಿಯ ಅನುರಣನ, ಬಾನಿನಲ್ಲಿ ಪಟಾಕಿ ಚಿತ್ತಾರದ ಸಂಭ್ರಮದೊಂದಿಗೆ ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ೨೨ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಶ್ರೀ ಬಾಲಾಜಿ ಕೃಪಾ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ೨೦೨೩ ಸೆಪ್ಟೆಂಬರ್‌ ೨೪ರ ಭಾನುವಾರ ಸಡಗರದೊಂದಿಗೆ ನಡೆಯಿತು.

ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಶಾಸಕರೂ ಆದ ಶ್ರೀ ಕೃಷ್ಣ ಬೈರೇಗೌಡ, ಬಡಾವಣೆಯ ನಿರ್ಮಾಪಕ ಶ್ರೀ ಎಸ್.‌ ಎನ್.‌ ಕೃಷ್ಣಯ್ಯ ಶೆಟ್ಟಿ, ರಾಜಕೀಯ ನಾಯಕರಾದ ಜಯಗೋಪಾಲ ಗೌಡ ಮತ್ತು ಶಿವಕುಮಾರ್‌ ಅವರು ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡರು.

ಸೆಪ್ಟೆಂಬರ್‌ ೨೩ರ ಶನಿವಾರ ಮಧ್ಯಾಹ್ನ ವರುಣ ಸಿಂಚನದ ಶುಭಾಶೀರ್ವಾದದೊಂದಿಗೆ ಮಕ್ಕಳು ಮತ್ತು ಮಹಿಳೆಯರ ಆಟೋಟ ಸ್ಪರ್ಧೆಗಳು ನಡೆದವು. ಇದೇ ವೇಳೆಯಲ್ಲಿ ಬಾಲಕ ಬಾಲಕಿಯರು ತಮ್ಮಿಷ್ಟದ ಹಾಡುಗಳಿಗೆ ಹೆಜ್ಜೆ ಹಾಕಿ ನರ್ತಿಸುತ್ತಾ ಸಂಭ್ರಮಿಸಿದರು.


ಅದೇ ದಿನ ರಾತ್ರಿ ವರುಣನ ಅಮೃತ ಧಾರೆಯೊಂದಿಗೆ ಶುದ್ಧಗೊಂಡ ಬಡಾವಣೆಯ ಉದ್ಯಾನವನ ವಿದ್ಯುದ್ದೀಪಗಳ ಅಲಂಕಾರದೊಂದಿಗೆ ಗಣಪನ ಆಹ್ವಾನಕ್ಕೆ ಸಜ್ಜಾಯಿತು. ಬೆಳಗ್ಗೆ ಬಡಾವಣೆಯ ನಿವಾಸಿಗಳು ಉತ್ಸಾಹದ ಶ್ರಮದಾನದೊಂದಿಗೆ ಉದ್ಯಾನದಲ್ಲಿ ತುಂಬಿದ್ದ ನೀರನ್ನು ತೆರವುಗೊಳಿಸಿ ಕಸ ತೆಗೆದು ಶುದ್ಧಗೊಳಿಸಿದರು. ಮಹಿಳೆಯರು ರಂಗೋಲಿ, ಪುಷ್ಪಗಳಿಂದ ಅಲಂಕಾರ ಮಾಡಿ ಹಾಕಿ ವಿಘ್ನ ವಿನಾಯಕನಿಗೆ ಸ್ವಾಗತ ಕೋರಿದರು.

ಬಡಾವಣೆಯಲ್ಲಿ ಗಣಪನ ದೇಗುಲ ನಿರ್ಮಾಣ, ಬಡಾವಣೆಯ ನೀರಿನ ಸಮಸ್ಯೆಯ ನಿವಾರಣೆ, ಎಲ್ಲ ನಿವಾಸಿಗಳ ಆಯುರಾರೋಗ್ಯ, ಸುಖ ಸಂಪತ್ತಿನ ವೃದ್ಧಿಯಾಗಬೇಕೆಂಬ ಸಂಕಲ್ಪದೊಂದಿಗೆ ಗಣಹೋಮ, ಗಣಪತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಿತು.


ಗಣಪನ ಪ್ರಾಣ ಪ್ರತಿಷ್ಠೆಯ ಹೊತ್ತಿಗೆ ಸರಿಯಾಗಿ ಆಗಮಿಸಿದ ಬಡಾವಣೆಯ ನಿರ್ಮಾಪಕ ಶ್ರೀ ಕೃಷ್ಣಯ್ಯ ಶೆಟ್ಟಿ ಅವರು ಗಣಪನಿಗೆ ಲಡ್ಡು ಪ್ರಸಾದವನ್ನು ಸಮರ್ಪಿಸಿದರು.

ಗಣಹೋಮದ ಪೂರ್ಣಾಹುತಿಯ ಹೊತ್ತಿಗೆ ಸರಿಯಾಗಿ ಆಗಮಿಸಿದ ಸಚಿವ ಶ್ರೀ ಕೃಷ್ಣ ಬೈರೇಗೌಡ, ಶಿವಕುಮಾರ್‌, ಜಯಗೋಪಾಲ ಗೌಡ ಅವರು ಹೋಮದ ಪೂರ್ಣಾಹುತಿ, ಮಹಾಪೂಜೆಯಲ್ಲಿ ಪಾಲ್ಗೊಂಡರು. ಕೇರಳದ ಚೆಂಡೆಯ ನಿನಾದ ಗಣಪನ ಮಹಾಪೂಜೆಗೆ ರಂಗೇರಿಸಿತು.

ಮಹಾಪೂಜೆ, ಪ್ರಸಾದ ವಿತರಣೆಯ ಜೊತೆಗೇ ಸುಮಾರು ಎರಡು ಗಂಟೆಗೂ ಹೆಚ್ಚುಕಾಲ ನಡೆದ ಕೇರಳ ಚೆಂಡೆಯ ಅನುರಣಕ್ಕೆ ಮಕ್ಕಳು, ಮಹಿಳೆಯರು, ಪುರುಷರು ಸೇರಿದಂತೆ ಬಡಾವಣೆಯ ನಿವಾಸಿಗಳು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಬಡಾವಣೆಯ ನ್ಯಾಯವಾದಿ ಶ್ರೀ ಮುನಿರಾಜು ಅವರು ಭಕ್ತರಿಗೆ ಶುಚಿ-ರುಚಿಯಾದ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು.

ಮಧ್ಯಾಹ್ನದ ಬಳಿಕ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಗಣಪತಿಯನ್ನು ಅಲಂಕರಿಸಲು ಬಳಸಲಾದ ಶಾಲಿನ ಹರಾಜು ನಡೆಯಿತು.



ಕರಾವಳಿ ಚೆಂಡೆಯ ಅನುರಣನ, ಬಾನಿನಲ್ಲಿ ವೈವಿದ್ಯಮಯ ಪಟಾಕಿಗಳ ಚಿತ್ತಾರದೊಂದಿಗೆ ಸಂಭ್ರಮದೊಂದಿಗೆ ಗಣಪತಿಯ ಮಹಾಮಂಗಳಾರತಿ, ಶೋಭಾಯಾತ್ರೆ ನಡೆಯಿತು.

ರಾಚೇನಹಳ್ಳಿ ಕೆರೆಯಲ್ಲಿ ಗಣಪನ ವಿಸರ್ಜನೆ ನಡೆಯಿತು.

ಜಾತಿ, ಮತ, ರಾಜಕೀಯ ಭಿನ್ನಾಭಿಪ್ರಾಯಗಳ ಭೇದವಿಲ್ಲದೆ ಬಡಾವಣೆಯ ಎಲ್ಲ ನಿವಾಸಿಗಳು ಪಾಲ್ಗೊಂಡದ್ದು,


ಶೋಭಾಯಾತ್ರೆಯಲ್ಲೂ ನಲಿದು ನರ್ತಿಸಿದ್ದು, ಟೆಂಟಿಗೆ ಬಡಾವಣೆಯ ನಿವಾಸಿ ಸಿರಾಜ್, ಕೇರಳ ಚೆಂಡೆಗೆ ಬಡಾವಣೆಯ ಮಲಯಾಳಂ ಬಂಧುಗಳು, ವಿವಿಧ ಸ್ಪರ್ಧೆಗಳ ಬಹುಮಾನ, ಪಟಾಕಿ ವೆಚ್ಚವನ್ನು ಶಿವಕುಮಾರ್‌, ಗಣಪನ ವಿಗ್ರಹವನ್ನು ಗಣೇಶ ಮತ್ತು ಸಂದೀಪ ಪ್ರಾಯೋಜಿಸಿದ್ದುದು ವಿಶೇಷವಾಗಿತ್ತು.

 

 


Advertisement