Showing posts with label Bolnadu. Show all posts
Showing posts with label Bolnadu. Show all posts

Friday, March 28, 2025

ವಿಟ್ಲ ಶ್ರೀ ಪಂಚಲಿಂಗೇಶ್ವರ- ಬೊಳ್ನಾಡು ಶ್ರೀ ಚೀರುಂಭ ಭಗವತಿ ಭೇಟಿ

 ವಿಟ್ಲ ಶ್ರೀ ಪಂಚಲಿಂಗೇಶ್ವರ- ಬೊಳ್ನಾಡು ಶ್ರೀ ಚೀರುಂಭ ಭಗವತಿ ಭೇಟಿ

ಇದು ೬೦೦ ವರ್ಷಗಳಗೊಮ್ಮೆ ನಡೆಯುವ ಅಪರೂಪದ ಉತ್ಸವ

ದೈವ -ದೇವತೆಗಳ ಬೀಡಾಗಿರುವ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ವಿಟ್ಲ ಪಾಂಡವರು ನೆಲೆಸಿದ್ದ ಏಕ ಚಕ್ರನಗರ ಎಂಬ ಪ್ರತೀತಿ ಇದೆ.

ಇದೇ ಬಂಟ್ವಾಳ ತಾಲೂಕಿನ ಬೊಳ್ನಾಡುವಿನ ಚೀರುಂಭ ಭಗವತಿ ದೇವಸ್ಥಾನ ಕೂಡಾ ಹಳೆಯದೇ. ಕೆಲವು ವರ್ಷಗಳ ಹಿಂದೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಆಗಿದ್ದರೆ, ಇತ್ತೀಚೆಗೆ ಬೊಳ್ನಾಡು ಚೀರುಂಭ ಭಗವತಿ ದೇವಸ್ಥಾನದ ಜೀರ್ಣೋದ್ಧಾರ ನಡೆದಿದೆ. ೨೦೨೫ರ ಮಾರ್ಚ್‌ ೨೦ರಿಂದ ೨೭ರವರೆಗೆ ಭಗವತಿ ದೇವಸ್ಥಾನದಲ್ಲಿ ಭರಣಿ ಮಹೋತ್ಸವ ನಡೆದಿದೆ.

ಈ ಸಂದರ್ಭದಲ್ಲಿ ಒಂದು ವಿಶೇಷವಾದ ಘಟನೆ ವಿಟ್ಲದಲ್ಲಿ ನಡೆದಿದೆ. ಮನುಷ್ಯರು ಅದರಲ್ಲೂ ಗಣ್ಯರು ಪರಸ್ಪರ ಭೇಟಿ ಮಾಡುವುದು ನಮಗೆಲ್ಲರಿಗೂ ಗೊತ್ತು. ಆದರೆ ದೇವರು- ದೇವಿ ಭೇಟಿ ಮಾಡುವುದು ಅಪರೂಪದ ಸಂಗತಿ. ಭಗವತಿ ದೇವಸ್ಥಾನದ ಭರಣಿ ಮಹೋತ್ಸವದ ಸಂದರ್ಭದಲ್ಲಿ ಚೀರುಂಭ ಭಗವತಿ, ಸನಿಹದ ಪಂಚಲಿಂಗೇಶ್ವರ ದೇಗುಲಕ್ಕೆ ಆಗಮಿಸಿ ಪಂಚಲಿಂಗೇಶ್ವರನ ದರ್ಶನಗೈದ ಘಟನೆ ನಡೆದಿದೆ.

ಶ್ರೀ ಪಂಚಲಿಂಗೇಶ್ವರ ಮತ್ತು ಚೀರುಂಭ ಭಗವತಿ ಭೇಟಿ ಹೀಗೆ ನಡೆಯುವುದು ೬೦೦ ವರ್ಷಗಳಿಗೆ ಒಮ್ಮೆ ಎಂಬ ಪ್ರತೀತಿ ಇದೆ. ಹೀಗಾಗಿ ಪ್ರಯಾಗದಲ್ಲಿ ನಡೆದ ಮಹಾಕುಂಭ ಮೇಳದಂತೆಯೇ, ಮನುಷ್ಯರ ಜೀವಮಾನದಲ್ಲಿ ಒಮ್ಮೆ ಮಾತ್ರ ಕಾಣಬಹುದಾದ, ಪಾಲ್ಗೊಳ್ಳಬಹುದಾದ ಅಪರೂಪದ ಭೇಟಿ ಇದು.

೨೦೨೫ರ ಮಾರ್ಚ್‌ ೨೫ರಂದು ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ಸವ ರೂಪದಲ್ಲಿ ಈ ಘಟನೆ ನಡೆಯಿತು. ಬೊಳ್ನಾಡು ಚೀರುಂಭ ಭಗವತಿ ದೇವಸ್ಥಾನದಿಂದ ಕಾಲ್ನಡಿಗೆಯಲ್ಲೇ ಹೊರಟು ವಿಟ್ಲದ ಶ್ರೀ ಪಂಚಲಿಂಗೇಶ್ವರ ಸನ್ನಿಧಾನಕ್ಕೆ ವಾದ್ಯಮೇಳದೊಂದಿಗೆ ಆಗಮಿಸಿದ ಭಗವತಿ ಮಾತೆಯು ಶ್ರೀ ಪಂಚಲಿಂಗೇಶ್ವರನ ದೇವರ ದರ್ಶನ-ಭೇಟಿಯನ್ನು ಮಾಡಿದ ಅಪರೂಪದ ದೃಶ್ಯವನ್ನು ಸಹಸ್ರಾರು ಮಂದಿ ವೀಕ್ಷಿಸಿದರು.


ಈ ಸಂದರ್ಭದ ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ.

ಈ ಕೆಳಗಿನವುಗಳನ್ನೂ ಓದಿರಿ:

ವಿಟ್ಲ ಪಂಚಲಿಂಗೇಶ್ವರನಿಗೆ ಮರುಹುಟ್ಟು ಸಂಭ್ರಮ

ವಿಟ್ಲ ಪಂಚಲಿಂಗೇಶ್ವರನಿಗೆ ಧರ್ಮಸ್ಥಳದ 'ಮುಗುಳಿ'

ವಿಟ್ಲಾಯನದ ಕೊನೆಯ ದಿನ

Wahl! What Water falls..!

Advertisement